ನವದೆಹಲಿ: ದ್ವೇಷದ ಭಾಷಣ, ಸುಳ್ಳು ಸುದ್ದಿ, ಅವಹೇಳನಾಕಾರಿ ಬರಹ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದೇಶದ್ರೋಹಿ ಚಟುವಟಿಕೆಗಳನ್ನು ನಿಯಂತ್ರಿಸಲಿರುವಕಾನೂನುಗಳಬಗ್ಗೆ ಜನವರಿ 15ರೊಳಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಹೇಳಿದೆ.
ಸಾಮಾಜಿಕ ಮಾಧ್ಯಮದಲ್ಲಿನ ಖಾತೆಗಳ ಗೂಢ ಲಿಪೀಕರಣವನ್ನು ಶೇರ್ ಮಾಡಬೇಕೆಂಬ ಬೇಡಿಕೆಗೆ ಸಂಬಂಧಪಟ್ಟಿರುವ ಕೆಲವು ಪ್ರಕರಣಗಳು ಮದ್ರಾಸ್, ಬಾಂಬೆ ಮತ್ತು ಮಧ್ಯ ಪ್ರದೇಶ ಹೈಕೋರ್ಟ್ನಲ್ಲಿ ಬಾಕಿ ಇದೆ. ಆ ಎಲ್ಲ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾವಣೆ ಮಾಡಿದೆ.
ಸುಪ್ರೀಂಕೋರ್ಟ್ಗೆ ಈ ಪ್ರಕರಣಗಳನ್ನು ವರ್ಗಾವಣೆ ಮಾಡಬೇಕು ಎಂದು ಫೇಸ್ಬುಕ್ ಮತ್ತು ವಾಟ್ಸ್ಆ್ಯಪ್ ಒತ್ತಾಯಿಸಿತ್ತು. ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ವಿಚಾರಣೆ ಜನವರಿ ಕೊನೆಯ ವಾರದಲ್ಲಿ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.