<p><strong>ನವದೆಹಲಿ:</strong> ‘ಸಕಾರಣಕ್ಕಾಗಿ ನಡೆಯುವ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು’ ಎಂದು ದೇಶದ ಜನರಿಗೆ, ಯುವಜನತೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕಿವಿಮಾತು ಹೇಳಿದರು.</p>.<p>ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ‘ಜಗತ್ತಿಗೆ ಅಹಿಂಸೆಯ ಕೊಡುಗೆಯನ್ನು ಮಹಾತ್ಮಾ ಗಾಂಧಿಯವರು ನೀಡಿದ್ದಾರೆ. ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ನೀವು ನಿರ್ಧರಿಸಬೇಕು. ಸತ್ಯ ಮತ್ತು ಅಹಿಂಸೆಯ ಸಂದೇಶಕ್ಕೆ ತಕ್ಕಂತೆ ನಾವು ನಡೆದುಕೊಳ್ಳುತ್ತಿದ್ದೇವೆಯೇ ಎನ್ನುವುದನ್ನು ಪರಾಮರ್ಶಿಸಿಕೊಳ್ಳಬೇಕು’ ಎಂದರು.</p>.<p>ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗವು ನವಭಾರತದ ಪ್ರಮುಖ ಅಂಗವಾಗಿದೆ. ಈ ಮೂರೂ ಅಂಗಗಳು ಪರಸ್ಪರಾವಲಂಬಿಯಾಗಿವೆ. ಆದರೆ ಇಡೀ ರಾಜ್ಯ<br />ಜನರ ಕೈಯಲ್ಲಿದೆ. ಜನರು ಭಾರತ ಗಣರಾಜ್ಯದ ಪ್ರಮುಖ ಚಾಲನಾಶಕ್ತಿ ಆಗಿದ್ದಾರೆ. ನಮ್ಮ ಭವಿಷ್ಯವನ್ನು ನಿರ್ಧರಿಸುವ ನಿಜವಾದ ಶಕ್ತಿ ನಮ್ಮಲ್ಲಿದೆ’ ಎಂದರು.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಷ್ಟ್ರದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಕೋವಿಂದ್ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಭಾಷಣದಲ್ಲಿ ಈ ವಿಷಯದ ಕುರಿತು ನೇರವಾಗಿ ಉಲ್ಲೇಖಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಸಕಾರಣಕ್ಕಾಗಿ ನಡೆಯುವ ಹೋರಾಟಗಳು ಅಹಿಂಸಾತ್ಮಕವಾಗಿರಬೇಕು’ ಎಂದು ದೇಶದ ಜನರಿಗೆ, ಯುವಜನತೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕಿವಿಮಾತು ಹೇಳಿದರು.</p>.<p>ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ‘ಜಗತ್ತಿಗೆ ಅಹಿಂಸೆಯ ಕೊಡುಗೆಯನ್ನು ಮಹಾತ್ಮಾ ಗಾಂಧಿಯವರು ನೀಡಿದ್ದಾರೆ. ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ನೀವು ನಿರ್ಧರಿಸಬೇಕು. ಸತ್ಯ ಮತ್ತು ಅಹಿಂಸೆಯ ಸಂದೇಶಕ್ಕೆ ತಕ್ಕಂತೆ ನಾವು ನಡೆದುಕೊಳ್ಳುತ್ತಿದ್ದೇವೆಯೇ ಎನ್ನುವುದನ್ನು ಪರಾಮರ್ಶಿಸಿಕೊಳ್ಳಬೇಕು’ ಎಂದರು.</p>.<p>ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗವು ನವಭಾರತದ ಪ್ರಮುಖ ಅಂಗವಾಗಿದೆ. ಈ ಮೂರೂ ಅಂಗಗಳು ಪರಸ್ಪರಾವಲಂಬಿಯಾಗಿವೆ. ಆದರೆ ಇಡೀ ರಾಜ್ಯ<br />ಜನರ ಕೈಯಲ್ಲಿದೆ. ಜನರು ಭಾರತ ಗಣರಾಜ್ಯದ ಪ್ರಮುಖ ಚಾಲನಾಶಕ್ತಿ ಆಗಿದ್ದಾರೆ. ನಮ್ಮ ಭವಿಷ್ಯವನ್ನು ನಿರ್ಧರಿಸುವ ನಿಜವಾದ ಶಕ್ತಿ ನಮ್ಮಲ್ಲಿದೆ’ ಎಂದರು.</p>.<p>ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಷ್ಟ್ರದ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಕೋವಿಂದ್ ಅವರು ಈ ಹೇಳಿಕೆ ನೀಡಿದ್ದಾರೆ. ಆದರೆ ಭಾಷಣದಲ್ಲಿ ಈ ವಿಷಯದ ಕುರಿತು ನೇರವಾಗಿ ಉಲ್ಲೇಖಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>