ಗಣರಾಜ್ಯೋತ್ಸವದ ಮುನ್ನಾ ದಿನ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ‘ಜಗತ್ತಿಗೆ ಅಹಿಂಸೆಯ ಕೊಡುಗೆಯನ್ನು ಮಹಾತ್ಮಾ ಗಾಂಧಿಯವರು ನೀಡಿದ್ದಾರೆ. ಯಾವುದು ಸರಿ ಯಾವುದು ತಪ್ಪು ಎನ್ನುವುದನ್ನು ನೀವು ನಿರ್ಧರಿಸಬೇಕು. ಸತ್ಯ ಮತ್ತು ಅಹಿಂಸೆಯ ಸಂದೇಶಕ್ಕೆ ತಕ್ಕಂತೆ ನಾವು ನಡೆದುಕೊಳ್ಳುತ್ತಿದ್ದೇವೆಯೇ ಎನ್ನುವುದನ್ನು ಪರಾಮರ್ಶಿಸಿಕೊಳ್ಳಬೇಕು’ ಎಂದರು.