ನವದೆಹಲಿ:ಇತ್ತೀಚೆಗೆ ನಿಧನರಾದ ಪೇಜಾವರವಿಶ್ವೇಶ ತೀರ್ಥ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವರಾದ ಜಾರ್ಜ್ ಫರ್ನಾಂಡಿಸ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಘೋಷಣೆಯಾಗಿದೆ.
71ನೇ ಗಣರಾಜ್ಯೋತ್ಸವದ ಮುನ್ನಾ ದಿನವಾದ ಶನಿವಾರ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.
ಅಕ್ಷರ ಸಂತ ಎಂದೇ ಪ್ರಸಿದ್ಧರಾಗಿರುವಹರೇಕಳ ಹಾಜಬ್ಬ, ಹಾಲಕ್ಕಿ ಸಮುದಾಯದ ತುಳಸಿ ಗೌಡ ಸೇರಿದಂತೆ ಅನೇಕ ಸಾಧಕರಿಗೆ ಪದ್ಮ ಶ್ರೀ ಪ್ರಶಸ್ತಿ ಘೋಷಣೆಯಾಗಿದೆ.
ತುಳಸಿ ಗೌಡ ಮತ್ತು ಹರೇಕಳ ಹಾಜಬ್ಬ
ಹರೇಕಳ ಹಾಜಬ್ಬ ಅವರು ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದು ಸಮಾಜಸೇವೆ (ಶಿಕ್ಷಣ) ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯವರಾದತುಳಸಿ ಗೌಡ ಅವರಿಗೆ ಸಮಾಜ ಸೇವೆ (ಪರಿಸರ) ಕ್ಷೇತ್ರದಲ್ಲಿ ಪ್ರಶಸ್ತಿ ಘೋಷಣೆಯಾಗಿದೆ.
ಪದ್ಮ ಶ್ರೀ ಪ್ರಶಸ್ತಿಗೆ ಆಯ್ಕೆಯಾದ ಇತರರು
ಹೆಸರು– ಸಾಧನೆಯ ಕ್ಷೇತ್ರ – ರಾಜ್ಯ
ಎಂ.ಪಿ.ಗಣೇಶ್ - ಕ್ರೀಡೆ - ಕರ್ನಾಟಕ
ಡಾ. ಬೆಂಗಳೂರು ಗಂಗಾಧರ – ವೈದ್ಯಕೀಯ - ಕರ್ನಾಟಕ
ಭರತ್ ಗೋಯೆಂಕಾ – ವ್ಯಾಪಾರ ಮತ್ತು ಉದ್ಯಮ – ಕರ್ನಾಟಕ
ಕೆ.ವಿ.ಸಂಪತ್ಕುಮಾರ್ ಮತ್ತು ವಿದುಶಿ ಜಯಲಕ್ಷ್ಮೀ ಕೆ.ಎಸ್. – ಸಾಹಿತ್ಯ, ಶಿಕ್ಷಣ ಮತ್ತು ಪತ್ರಿಕೋದ್ಯಮ – ಕರ್ನಾಟಕ