ನವದೆಹಲಿ: ಹುತಾತ್ಮ ಯೋಧ ನಯಿಬ್ ಸುಬೇದಾರ್ ಸೊಂಬಿರ್ ಸೇರಿದಂತೆ ಆರು ಸೈನಿಕರಿಗೆ ಶೌರ್ಯ ಚಕ್ರ ಪ್ರಶಸ್ತಿ ಘೋಷಿಸಲಾಗಿದೆ.
ಲೆಫ್ಟಿನೆಂಟ್ ಕರ್ನಲ್ ಜ್ಯೋತಿ ಲಾಮ, ಮೇಜರ್ ಕೊನ್ಜೆನ್ಗ್ಬಾಂ ಬಿಜೇಂದ್ರ ಸಿಂಗ್, ನಯಿಬ್ ಸುಬೇದಾರ್ ನರೇಂದರ್ ಸಿಂಗ್ ಹಾಗೂ ನಾಯಕ್ ನರೇಶ್ ಕುಮಾರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ಫೆಬ್ರುವರಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ನಡೆದಿದ್ದ ಕಾರ್ಯಾಚರಣೆ ವೇಳೆ ಸೊಂಬಿರ್ ಹುತಾತ್ಮರಾಗಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.