‘ಮೀಸಲಾತಿಯ ಫಲಾನುಭವಿಗಳಾಗಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದೊಳಗೇ ಹಲವು ತೊಡಕುಗಳಿವೆ.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲೇ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದುವರಿದ ವರ್ಗಗಳಿವೆ. ಆದರೆ, ಈ ಜಾತಿ ಮತ್ತು ಪಂಗಡಗಳಲ್ಲಿ ಕೆಲವು ವರ್ಗಗಳು ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣದ ಕಾರ್ಯಕ್ರಮಗಳಿಂದ ವಂಚಿತವಾಗಿವೆ. ಹೀಗೆ ವಂಚಿತವಾದ ವರ್ಗಗಳಿಗೆ ಮೀಸಲಾತಿಯ ಅನುಕೂಲಗಳು ದೊರೆಯುತ್ತಿಲ್ಲ’ ಎಂದು ಪೀಠವು ಅಭಿಪ್ರಾಯಪಟ್ಟಿದೆ.