ದೇವಾಲಯಗಳು, ಸ್ಮಶಾನಗಳು ಮತ್ತು ನೀರಿನ ಮೂಲಗಳು ಎಲ್ಲರಿಗೂ ಮುಕ್ತವಾಗಿರಬೇಕು. ಇವು ಯಾವುದೇ ಒಂದು ಜಾತಿಗೆ ಮೀಸಲಾಗಿ ಇರಬಾರದು ಎಂಬುದು ಆರ್ಎಸ್ಎಸ್ನ ದೃಢ ನಂಬಿಕೆ ಎಂದು ಸಂಘಟನೆಯ ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಆರ್ಎಸ್ಎಸ್ನ ಮೂರು ದಿನಗಳ ಸಮನ್ವಯ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.