ಅಖಿಲ ಭಾರತ ಹಿಂದೂ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮತ್ತು ಅವರ ತಂಡ, ಮಹಾತ್ಮ ಗಾಂಧಿ ಅವರ 71ನೇ ಪುಣ್ಯಸ್ಮರಣೆಯ ದಿನ ಗಾಂಧಿ ಪ್ರತಿಕೃತಿಗೆ ಗುಂಡು ಹಾರಿಸುವ ಮೂಲಕ ಹತ್ಯೆ ಘಟನೆಯನ್ನು ಮರುಸೃಷ್ಟಿಸಲಾಗಿತ್ತು. ಬಲಪಂಥೀಯರ ಈ ಆಚರಣೆ ಸಂಬಂಧ ಉತ್ತರ ಪ್ರದೇಶ ಪೊಲೀಸರು 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ಇತರೆ ಮೂವರನ್ನು ಕಳೆದ ವಾರ ಪೊಲೀಸರು ಬಂಧಿಸಿದ್ದರು. ಪೂಜಾ ಪತಿ ಅಶೋಕ್ ಪಾಂಡೆಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.