ಕೊಯಮತ್ತೂರು: ತಮಿಳುನಾಡಿನ ಸೇಲಂ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನ ವೇಳೆ ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. 30 ಜನರು ಗಾಯಗೊಂಡಿದ್ದಾರೆ.
ಕೃಷ್ಣಗಿರಿಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್, ಹೆದ್ದಾರಿಯಲ್ಲಿ ನಿಂತಿದ್ದ ವ್ಯಾನ್ಗೆ ಡಿಕ್ಕಿಯಾಗಿದೆ. ನಂತರ ಎದುರಿಗೆ ಬಂದ ಮತ್ತೊಂದು ಖಾಸಗಿ ಬಸ್ಗೆ ಡಿಕ್ಕಿಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರ ಪೈಕಿ ಮೂವರು ಕನ್ನಡಿಗರು, ನಾಲ್ವರು ಕೇರಳದವರು ಎನ್ನಲಾಗಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.