ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ನಿರೀಕ್ಷಿತ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಎಲ್ಲಾ ಸ್ವರೂಪದ ಸಂಚಾರ ನಿಯಮಗಳ ಉಲ್ಲಂಘನೆಗೆ ಕಠಿಣ ಶಿಕ್ಷೆ ಅಥವಾ ದಂಡ ವಿಧಿಸುವ ವ್ಯವಸ್ಥೆ ಜಾರಿಯಲ್ಲಿ ಇಲ್ಲದಿರುವುದೇ ಇದಕ್ಕೆ ಕಾರಣ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಭಿಪ್ರಾಯಪಟ್ಟಿದೆ.
ಸಚಿವಾಲಯವು ಈಚೆಗೆ ಬಿಡುಗಡೆ ಮಾಡಿದ ‘ಭಾರತದಲ್ಲಿ ರಸ್ತೆ ಅಪಘಾತಗಳು–2017’ ವರದಿಯಲ್ಲಿ ಇದರ ಉಲ್ಲೇಖವಿದೆ.