‘ಅಧಿಕೃತ ಸಭೆಯಲ್ಲಿ ಯಾರು ಭಾಗವಹಿಸಬೇಕು, ಬೇಡ ಎಂಬುವುದನ್ನು ನಿರ್ಧರಿಸುವ ವಿಶೇಷ ಅಧಿಕಾರ ಮುಖ್ಯಮಂತ್ರಿಗಳಿಗಿದೆ. ಅಲ್ಲದೇ, ಗೃಹ ಇಲಾಖೆಗೆ ಸಂಬಂಧಿಸಿದ ಗೋಪ್ಯತೆಯ ಸಭೆಯೇನಲ್ಲ. ಪ್ರವಾಸೋದ್ಯಮದ ಅಭಿವೃದ್ಧಿಗೆ ಸಂಬಂಧಿಸಿದ ಸಭೆಯಾಗಿದ್ದು, ಸಭೆಯಲ್ಲಿ ಪ್ರಸ್ತಾಪಗೊಂಡ ವಿಷಯಗಳು ಸಹ ಈಗಾಗಲೇ ಬಹಿರಂಗವಾಗಿವೆ’ ಎಂದು ಸರ್ದೇಸಾಯಿ ಹೇಳಿದ್ದಾರೆ.