ನವದೆಹಲಿ:ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಸಿಬ್ಬಂದಿ ಸೋಂಕಿನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬುಧವಾರ ಘೋಷಿಸಿದ್ದಾರೆ.
ಮೂವರು ವೈದ್ಯರಿಗೆ ಕೊರೊನೊ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರೊಂದಿಗೆ ಕೇಜ್ರಿವಾಲ್ ಸಮಾಲೋಚನೆ ನಡೆಸಿದರು.
‘ನಿಮ್ಮ ಸೇವೆ ಯಾವ ಸೈನಿಕರಿಗಿಂತ ಕಡಿಮೆಯಿಲ್ಲ. ಖಾಸಗಿ ಮತ್ತು ಸರ್ಕಾರಿ ವೈದ್ಯರು, ನರ್ಸ್ಗಳು ಮತ್ತು ಸ್ವಚ್ಛತಾ ಕಾರ್ಮಿಕರಿಗೂ ಈ ಪರಿಹಾರ ಅನ್ವಯವಾಗಲಿದೆ’ ಎಂದು ತಿಳಿಸಿದ್ದಾರೆ.