ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿನಿ ದುರುಗುಟ್ಟಿ ನೋಡಿದ್ದಕ್ಕೆ ಕೊಲೆ

Last Updated 7 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದ್ದು, ದೇಹದ ಮೇಲೆ ಗಂಭೀರ ಗಾಯದ ಗುರುತುಗಳಿವೆ.

ಮಹೇಶ್‌ ಕಾರಂಡೆ (16) ಮೃತ ಬಾಲಕ. ಮಂಗಳವಾರ ಘಟನೆ ನಡೆದಿದೆ. ಈ ಸಂಬಂಧ ಇಬ್ಬರು ಸಹಪಾಠಿಗಳನ್ನು ಪೊಲೀಸರು ಬುಧವಾರ ಬಂಧಿಸಿ, ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇವರಲ್ಲಿ ಒಬ್ಬ ಬಾಲಕನಾಗಿದ್ದು, ಮತ್ತೊಬ್ಬ 20 ವರ್ಷದವನು. ಪಿರಾಲೆ ಎಂಬ ಗ್ರಾಮದ ಸಮತಾ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ಪ್ರಾಯೋಗಿಕ ಪರೀಕ್ಷೆಗೆ ಮೊದಲು ಕಂಪ್ಯೂಟರ್‌ ಕೊಠಡಿಯ ಸಮೀಪ ಹತ್ಯೆ ನಡೆದಿದೆ. ನಂತರ ಆರೋಪಿಗಳು ಪ್ರಾಯೋಗಿಕ ಪರೀಕ್ಷೆಗೂ ಹಾಜರಾಗದೆ ನಾಪತ್ತೆಯಾಗಿದ್ದರು. ಇದು ಇವರ ಮೇಲಿನ ಅನುಮಾನಕ್ಕೆ ಕಾರಣವಾಯಿತು.

ವಿದ್ಯಾರ್ಥಿನಿಯೊಬ್ಬಳನ್ನು ಕಾರಂಡೆ ದುರುಗುಟ್ಟಿ ನೋಡಿದ್ದನ್ನು ಆಕ್ಷೇಪಿಸಿದ್ದ ಇವರು, ಅವನೊಂದಿಗೆ ವಾಗ್ವಾದ ನಡೆಸಿದ್ದರು. ಬಳಿಕ ಕುಡುಗೋಲಿನಿಂದ ಹಲ್ಲೆ ನಡೆಸಿದ್ದರು ಎಂದು ಹೇಳಲಾಗಿದೆ.

‘ಕಾರಂಡೆಯನ್ನು ಶಾಲಾ ಸಿಬ್ಬಂದಿ ಕೂಡಲೇ ಆಸ್ಪತ್ರೆಗೆ ಕರೆತಂದರಾದರೂ ಆತ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದರು’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT