ಕೋಲ್ಕತ್ತ: ರಾಜ್ಯದ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ಆರ್ಎಸ್ಎಸ್ ಜೊತೆಯಾಗಿ ಕೆಲಸ ಮಾಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಕಳೆದ ವರ್ಷ ಆರ್ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನೂ ಮಮತಾ ಟೀಕಿಸಿದ್ದಾರೆ.
‘ಬೆಹರಾಂಪುರಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಹಾಗೂ ಪ್ರಣವ್ ಮುಖರ್ಜಿ ಅವರ ಪುತ್ರ ಅಭಿಜಿತ್ ಮುಖರ್ಜಿ ಪ್ರತಿನಿಧಿಸುತ್ತಿರುವ ಜಂಗೀಪುರ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಆರ್ಎಸ್ಎಸ್ ಬೆಂಬಲ ಇದೆ’ ಎಂದು ಆರೋಪಿಸಿದ್ದಾರೆ.
ಅಭಿಜಿತ್ ಮುಖರ್ಜಿಜಂಗೀಪುರದ ಹಾಲಿ ಸಂಸದ. ಈ ಬಾರಿಯೂ ಕಾಂಗ್ರೆಸ್ ಟಿಕೆಟ್ನಡಿ ಸ್ಪರ್ಧಿಸಿರುವ ಅಭಿಜಿತ್ ಗೆಲುವಿಗೆ ಆರ್ಎಸ್ಎಸ್ ಕಾರ್ಯೋನ್ಮುಖವಾಗಿದೆ ಎಂದು ಮಮತಾ ದೂರಿದ್ದಾರೆ.