ಲೋಕಸಭೆ ಮತ್ತು ಎಲ್ಲ ರಾಜ್ಯಗಳ ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಬಗ್ಗೆ ಮಮತಾ ಬ್ಯಾನರ್ಜಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿಲ್ಲ.ಆದರೆ, ‘ಇಂಥ ಗಂಭೀರ ಮತ್ತು ಸೂಕ್ಷ್ಮ ವಿಚಾರವನ್ನು ಸಾಂವಿಧಾನಿಕ ತಜ್ಞರು, ಚುನಾವಣಾ ಪರಿಣತರೊಂದಿಗೆ ಚರ್ಚಿಸದೇ ಸರ್ಕಾರ ತರಾತುರಿಯಲ್ಲಿ ಈ ಸಭೆಯನ್ನು ಏರ್ಪಾಟು ಮಾಡುತ್ತಿರುವಂತಿದೆ,’ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ವಿಚಾರದ ಕುರಿತು ಶ್ವೇತ ಪತ್ರ ಹೊರಡಿಸುವಂತೆಯೂ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.