ಈ ವೇಳೆ ಮಾತನಾಡಿದ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಗಂಗಾಧರ ಬಡಿಗೇರ, ‘ಸರ್ಕಾರ ಮಾಲಿನ್ಯ ನಿಯಂತ್ರಣ ಕಾಯ್ದೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ವೇದಾಂತ ಕಂಪನಿಯು ತನ್ನ ಉದ್ಯಮವನ್ನು ನಡೆಸುತ್ತಿರುವ ಆರೋಪ ಎದುರಿಸುತ್ತಿದೆ. ಕಾರ್ಖಾನೆಯಿಂದ ಹೊರಬರುವ ವಿಷಕಾರಿ ತ್ಯಾಜ್ಯ ಸುತ್ತಮುತ್ತಲಿನ ಪರಿಸರ, ಕೃಷಿ ಭೂಮಿಯ ಮೇಲೆ ತೀವ್ರ ತರವಾದ ಕೆಟ್ಟ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಿಯ ಹಸಿರು ಮಂಡಳಿಯು ಕಾರ್ಖಾನೆಯನ್ನು ಮುಚ್ಚಲು ಆದೇಶ ನೀಡಿದ್ದರೂ, ಹಿಂಬಾಗಿಲ ಮೂಲಕ ಅನುಮತಿ ಪಡೆದು ತನ್ನ ಚಟುವಟಿಕೆಗಳನ್ನು ಮುಂದುವರೆಸಿತ್ತು’ ಎಂದು ಟೀಕಿಸಿದರು.