ಮಹಾತ್ಮ ಗಾಂಧಿಯ 150ನೇ ಜನ್ಮದಿನದ ಅಂಗವಾಗಿ ಇಲ್ಲಿನ ಸಾಬರಮತಿ ಆಶ್ರಮದಲ್ಲಿ ಆಯೋಜಿಸಿದ್ದ ‘ಸ್ವಚ್ಛ ಭಾರತ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸ್ವಚ್ಛ ಭಾರತ’ ಅಭಿಯಾನದಿಂದ ಪ್ರೇರಣೆ ಪಡೆದು ದೇಶದ ಗ್ರಾಮೀಣ ಪ್ರದೇಶಗಳ ಜನರು ತಮ್ಮ ಗ್ರಾಮವನ್ನು ಬಯಲುಶೌಚದಿಂದ ಮುಕ್ತಗೊಳಿಸುವ ಇಚ್ಛಾಶಕ್ತಿ ಪ್ರದರ್ಶಿಸಿದ್ದಾರೆ. ನೈರ್ಮಲ್ಯಕ್ಕೆ ಸಂಬಂಧಿಸಿದಂಥ ವಿಚಾರಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಇದ್ದ ಹಿಂಜರಿಕೆಯು ಈಗ ಮಾಯವಾಗಿದೆ. ನೈರ್ಮಲ್ಯದ ಬಗ್ಗೆ ಮುಕ್ತವಾಗಿ ಚರ್ಚಿಸುವುದು ಈಗ ಜನರ ಚಿಂತನಾ ಕ್ರಮವಾಗಿದೆ ಎಂದು ಮೋದಿ ವಿಶ್ಲೇಷಿಸಿದರು.