'ದೇಗುಲ ಪ್ರವೇಶಕ್ಕೆ ಯಾರನ್ನೂ ನಿರ್ಬಂಧಿಸಲು ಸಾಧ್ಯವಿಲ್ಲ. ಇದು ಕೇವಲ ಹಿಂದೂ ಮಹಿಳೆಯರ ದೇಗುಲ ಪ್ರವೇಶ ವಿಚಾರವಷ್ಟೇ ಅಲ್ಲ. ಮುಸ್ಲಿಮರು, ಪಾರ್ಸಿಗಳ ವಿಚಾರವೂ ಇದೆ. ವೈಯಕ್ತಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯದ ವಿಚಾರವೂ ಇದರಲ್ಲಿದೆ. ಹೀಗಾಗಿ, ಈ ಬಗ್ಗೆ ವಿಸ್ತೃತವಾದ ಮತ್ತು ವ್ಯಾಪಕವಾದ ಚರ್ಚೆಯಾಗಬೇಕಿರುವುದರಿಂದ ಏಳು ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಲಾಗಿದೆ' ಎಂದು ಸುಪ್ರೀಂ ಕೋರ್ಟ್ ಹೇಳಿತು.