ಮಹಿಳೆಯರ ದೇಗುಲ ಪ್ರವೇಶವನ್ನು ವಿರೋಧಿಸಿ ಶಬರಿಮಲೆ ಕರ್ಮಸಮಿತಿ ಮತ್ತುಅಂತರರಾಷ್ಟ್ರೀಯ ಹಿಂದೂ ಪರಿಷತ್ (ಎಎಚ್ಪಿ) ಕರೆಕೊಟ್ಟಿರುವ ಕೇರಳ ಬಂದ್ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರತಿಭಟನಾಕಾರರು ಹಿಂಸಾಚಾರ, ರಸ್ತೆ ತಡೆಗೆ ಮುಂದಾದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹರಾ ಎಚ್ಚರಿಕೆ ನೀಡಿದ್ದಾರೆ.