ಕೊಚ್ಚಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರಪ್ರವೇಶವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಹಿಂಸಾಚಾರದಲ್ಲಿ ಭಾಗಿಯಾದವರ ಫೋಟೊಗಳನ್ನು ಪ್ರಕಟಿಸಿದ ಕೇರಳ ಪೊಲೀಸರುಇಲ್ಲಿಯವರೆಗೆ 1407 ಮಂದಿಯನ್ನು ಬಂಧಿಸಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರ ಇನ್ನಷ್ಟು ಫೋಟೊಗಳನ್ನು ಪ್ರಕಟಿಸುವುದಾಗಿ ಕೇರಳ ಪೊಲೀಸ್ ಇಲಾಖೆ ಹೇಳಿದೆ.
ಏತನ್ಮಧ್ಯೆ, ಹಿಂಸಾಚಾರಗಳಲ್ಲಿ ಭಾಗಿಯಾದವರನ್ನು ಮಾತ್ರ ಬಂಧಿಸಿದರೆ ಸಾಕು. ಫೋಟೊಗಳನ್ನು ಪ್ರಕಟಿಸಿ ಗ್ಯಾಲರಿ ಮಾಡುವುದರಲ್ಲಿ ಮಾತ್ರ ಆಸಕ್ತಿ ವಹಿಸಬೇಡಿ ಎಂದು ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ.