‘ದೇವಸ್ಥಾನಕ್ಕೆ ಸಂಬಂಧಪಟ್ಟವರ ಜತೆ ಚರ್ಚಿಸಿದ ನಂತರವೇ 14ರಿಂದ ಭಕ್ತರಿಗೆ ಅವಕಾಶ ಕೊಡುವ ತೀರ್ಮಾನ ಕೈಗೊಳ್ಳಲಾಗಿತ್ತು. ಭಕ್ತರ ಭಾವನೆಗಳನ್ನು ಗೌರವಿಸಿ ಈ ನಿರ್ಧಾರಕ್ಕೆ ಬರಲಾಗಿತ್ತೇ ವಿನಾ ದೇವಸ್ಥಾನಗಳನ್ನು ಕೂಡಲೇ ತೆರೆಯಬೇಕೆಂಬ ಹಟ ಸರ್ಕಾರಕ್ಕೆ ಇಲ್ಲ. ಈಗ ಮುಖ್ಯ ಅರ್ಚಕರು ಆಕ್ಷೇಪ ವ್ಯಕ್ತಪಡಿಸಿರುವುದರಿಂದ, ಪುನಃ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ದೇವಸ್ವಂ ಖಾತೆ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ.