<p class="title"><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇವಸ್ಥಾನದ ವಾರ್ಷಿಕೋತ್ಸವ ಪ್ರಯುಕ್ತ ಮಾರ್ಚ್ 11ರಿಂದ 10 ದಿನಗಳ ಕಾಲ ಭಕ್ತರ ದರ್ಶನಕ್ಕೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ.</p>.<p>ಪ್ರಧಾನ ಅರ್ಚಕ ಕಂದರಾರು ರಾಜೀವರು ನೇತೃತ್ವದಲ್ಲಿ ವಾರ್ಷಿಕೋತ್ಸವ ನಡೆಯಲಿದೆ. ಮಾರ್ಚ್ 21ರಂದು ಉತ್ಸವ ಸಮಾಪನವಾಗಲಿದೆ ಎಂದು ದೇವಸ್ಥಾನದ ಆಡಳಿತ ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೇಳಿಕೆಯಲ್ಲಿ ತಿಳಿಸಿದೆ.</p>.<p>ದೇವಸ್ಥಾನದ ಗರ್ಭಗುಡಿಗೆ ಹೊಸದಾಗಿ ಅಳವಡಿಸಿರುವ ಚಿನ್ನ ಲೇಪಿತ ಬಾಗಿಲನ್ನು ಇದೇ ಸಂದರ್ಭ ಅನಾವರಣಗೊಳಿಸಲಾಗುತ್ತಿದೆ.</p>.<p>ಸಣ್ಣಪುಟ್ಟ ಬಿರುಕು ಕಾಣಿಸಿಕೊಂಡಿದ್ದ ಹಳೆಯ ಬಾಗಿಲನ್ನು ತೆರವುಗೊಳಿಸಿ, ತೇಗದ ಮರ ಬಳಸಿ ಹೊಸ ಬಾಗಿಲನ್ನು ವಿನ್ಯಾಸಗೊಳಿಸಲಾಗಿದೆ. ಅಲ್ಲದೆ, ಈ ಬಾಗಿಲಿಗೆ ನಾಲ್ಕು ಕೆ.ಜಿ. ಚಿನ್ನ ಮತ್ತು ತಾಮ್ರದ ಲೇಪ ಹೊದಿಸಲಾಗಿದೆ.ಉನ್ನಿ ನಂಬೂದಿರಿ ನೇತೃತ್ವದಲ್ಲಿ ಶಬರಿಮಲೆಯ ಭಕ್ತರ ಗುಂಪೊಂದು ಈ ಬಾಗಿಲಿನ ವೆಚ್ಚ ಭರಿಸಿದೆ ಎಂದು ಟಿಡಿಬಿ ಅಧ್ಯಕ್ಷ ಎ.ಪದ್ಮಕುಮಾರ್ ತಿಳಿಸಿದ್ದಾರೆ.</p>.<p>ಎಲ್ಲ ವಯೋಮಾನದ ಮಹಿಳೆಯರು ದೇವಸ್ಥಾನ ಪ್ರವೇಶಿಸಲು ಅನುಮತಿ ಕಲ್ಪಿಸಿ ಹಿಂದಿನ ವರ್ಷದ ಸೆಪ್ಟೆಂಬರ್ 28ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ವಿರೋಧಿಸಿ ಅಯ್ಯಪ್ಪ ಭಕ್ತರು ನಡೆಸಿದ ಭಾರಿ ಪ್ರತಿಭಟನೆಗೆ ದೇವಸ್ಥಾನ ಸಾಕ್ಷಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ತಿರುವನಂತಪುರ:</strong> ಶಬರಿಮಲೆ ಅಯ್ಯಪ್ಪ ದೇವಸ್ಥಾನದ ವಾರ್ಷಿಕೋತ್ಸವ ಪ್ರಯುಕ್ತ ಮಾರ್ಚ್ 11ರಿಂದ 10 ದಿನಗಳ ಕಾಲ ಭಕ್ತರ ದರ್ಶನಕ್ಕೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತಿದೆ.</p>.<p>ಪ್ರಧಾನ ಅರ್ಚಕ ಕಂದರಾರು ರಾಜೀವರು ನೇತೃತ್ವದಲ್ಲಿ ವಾರ್ಷಿಕೋತ್ಸವ ನಡೆಯಲಿದೆ. ಮಾರ್ಚ್ 21ರಂದು ಉತ್ಸವ ಸಮಾಪನವಾಗಲಿದೆ ಎಂದು ದೇವಸ್ಥಾನದ ಆಡಳಿತ ನಿರ್ವಹಿಸುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಹೇಳಿಕೆಯಲ್ಲಿ ತಿಳಿಸಿದೆ.</p>.<p>ದೇವಸ್ಥಾನದ ಗರ್ಭಗುಡಿಗೆ ಹೊಸದಾಗಿ ಅಳವಡಿಸಿರುವ ಚಿನ್ನ ಲೇಪಿತ ಬಾಗಿಲನ್ನು ಇದೇ ಸಂದರ್ಭ ಅನಾವರಣಗೊಳಿಸಲಾಗುತ್ತಿದೆ.</p>.<p>ಸಣ್ಣಪುಟ್ಟ ಬಿರುಕು ಕಾಣಿಸಿಕೊಂಡಿದ್ದ ಹಳೆಯ ಬಾಗಿಲನ್ನು ತೆರವುಗೊಳಿಸಿ, ತೇಗದ ಮರ ಬಳಸಿ ಹೊಸ ಬಾಗಿಲನ್ನು ವಿನ್ಯಾಸಗೊಳಿಸಲಾಗಿದೆ. ಅಲ್ಲದೆ, ಈ ಬಾಗಿಲಿಗೆ ನಾಲ್ಕು ಕೆ.ಜಿ. ಚಿನ್ನ ಮತ್ತು ತಾಮ್ರದ ಲೇಪ ಹೊದಿಸಲಾಗಿದೆ.ಉನ್ನಿ ನಂಬೂದಿರಿ ನೇತೃತ್ವದಲ್ಲಿ ಶಬರಿಮಲೆಯ ಭಕ್ತರ ಗುಂಪೊಂದು ಈ ಬಾಗಿಲಿನ ವೆಚ್ಚ ಭರಿಸಿದೆ ಎಂದು ಟಿಡಿಬಿ ಅಧ್ಯಕ್ಷ ಎ.ಪದ್ಮಕುಮಾರ್ ತಿಳಿಸಿದ್ದಾರೆ.</p>.<p>ಎಲ್ಲ ವಯೋಮಾನದ ಮಹಿಳೆಯರು ದೇವಸ್ಥಾನ ಪ್ರವೇಶಿಸಲು ಅನುಮತಿ ಕಲ್ಪಿಸಿ ಹಿಂದಿನ ವರ್ಷದ ಸೆಪ್ಟೆಂಬರ್ 28ರಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಈ ತೀರ್ಪನ್ನು ವಿರೋಧಿಸಿ ಅಯ್ಯಪ್ಪ ಭಕ್ತರು ನಡೆಸಿದ ಭಾರಿ ಪ್ರತಿಭಟನೆಗೆ ದೇವಸ್ಥಾನ ಸಾಕ್ಷಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>