ಪಂದಳಂ ಅರಮನೆಯ ಪ್ರತಿನಿಧಿಕೂಡ ಸರ್ಕಾರ ನೀಡಿರುವ ಹೇಳಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ತೀರ್ಥಯಾತ್ರೆ ಋತುವಿನಲ್ಲಿ ಅಯ್ಯಪ್ಪ ದರ್ಶನಕ್ಕಾಗಿ 10–50ರ ವಯಸ್ಸಿನ 7,564 ಮಹಿಳೆಯರು ಕೇರಳ ಪೊಲೀಸರಲ್ಲಿ ನೋಂದಣಿ ಮಾಡಿಸಿಕೊಂಡಿದ್ದರು. ಇವರಲ್ಲಿ 51 ಮಹಿಳೆಯರು ದರ್ಶನ ಪಡೆದಿರುವುದಾಗಿ ದಾಖಲೆಗಳಲ್ಲಿ ಇದೆ. ಉಳಿದವರು ದರ್ಶನ ಪಡೆದಿರಬಹುದು ಅಥವಾ ಈ ಬಾರಿ ಶಬರಿಮಲೆಯಲ್ಲಿ ಸೃಷ್ಟಿಯಾಗಿರುವ ಸಂಘರ್ಷಾತ್ಮಕ ಸ್ಥಿತಿಯ ಕಾರಣಕ್ಕೆ ತಮ್ಮ ಯೋಜನೆ ಕೈಬಿಟ್ಟಿರಬಹುದು ಎಂದು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ಹೇಳಿದ್ದಾರೆ.