ಸ್ಥಳದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಅಲ್ಲಿನ ಅಹಿತಕರ ವಾತಾವರಣದ ಬಗ್ಗೆ ಮಹಿಳೆಯರಿಗೆ ತಿಳಿಸಿದ್ದಾರೆ. ಆದರೆ, ಅಯ್ಯಪ್ಪನ ದರ್ಶನ ಮಾಡದೇ ಅಲ್ಲಿಂದ ಹೋಗುವುದಿಲ್ಲ ಎಂದು ಅವರು ಪಟ್ಟು ಹಿಡಿದಿದ್ದಾರೆ. ದೇವಸ್ಥಾನ ಮತ್ತು ಅದರ ಎರಡು ಬೇಸ್ ಕ್ಯಾಂಪ್ಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದರೂ ಅದನ್ನು ಮೀರಿ ಭಕ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.