ಶಬರಿಮಲೆಯಲ್ಲಿ ಈಗಿರುವ ಎಲ್ಲ ನಿರ್ಬಂಧಗಳನ್ನು ತೆಗೆದುಹಾಕಬೇಕು,ಕೆ. ಸುರೇಂದ್ರನ್ ವಿರುದ್ಧವಿರುವ ಸುಳ್ಳು ಕೇಸುಗಳನ್ನು ವಾಪಸ್ ತೆಗೆದುಕೊಳ್ಳಬೇಕು, ಅಯ್ಯಪ್ಪ ಭಕ್ತರಿಗೆ ಸೌಕರ್ಯಗಳನ್ನು ನೀಡಬೇಕು, ಮುಷ್ಕರ ನಿರತರ ವಿರುದ್ಧ ಸುಳ್ಳು ಕೇಸು ದಾಖಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.ಕೇರಳ ಸರ್ಕಾರ15 ದಿನಗಳೊಳಗೆ ಈ ಒತ್ತಾಯಕ್ಕೆ ಸ್ಪಂದಿಸದೇ ಇದ್ದರೆ ಮುಷ್ಕರವನ್ನು ಮತ್ತಷ್ಟು ತೀವ್ರವಾಗಿಸುವುದಾಗಿ ಕೋರ್ ಕಮಿಟಿ ಹೇಳಿದೆ.