ಇಬ್ಬರು ಮಹಿಳೆಯರ ಸುರಕ್ಷತೆಯ ಪ್ರಶ್ನೆಯನ್ನು ಮಾತ್ರ ಪರಿಗಣಿಸಲಾಗುವುದು. ಹಾಗಾಗಿ, ರಕ್ಷಣೆ ಕೋರಿ ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ಶಬರಿಮಲೆ ವಿಚಾರಕ್ಕೆ ಸಂಬಂಧಿಸಿ ಬಾಕಿ ಇರುವ ಅರ್ಜಿಗಳ ಜತೆಗೆ ಸೇರಿಸಲಾಗುವುದಿಲ್ಲ. ಅಷ್ಟೇ ಅಲ್ಲ, ಮಹಿಳೆಯರ ರಕ್ಷಣೆಯ ವಿಚಾರದಲ್ಲಿ ಬೇರೆ ಯಾವುದೇ ರೀತಿಯ ಅರ್ಜಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ಹೇಳಿದೆ.