'ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂಬುದು ನಮ್ಮೆಲ್ಲರ ಇಚ್ಛೆಯಾಗಿದೆ' ಎಂದರು. ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿ ನಡೆಸಿದ ಅವರು, ಭಾರತ–ಚೀನಾ ಗಡಿ ಭಾಗದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪೆಟ್ರೋಲ್, ಡಿಸೇಲ್ ಬೆಲೆ ದಿನದಿಂದ ದಿನಕ್ಕೆ ಏರುತ್ತಿದೆ. ಆದಷ್ಟು ಬೇಗ ಕೇಂದ್ರ ಸರ್ಕಾರ ಪೆಟ್ರೋಲ್,ಡಿಸೇಲ್ ಬೆಲೆಗಳನ್ನು ಇಳಿಸಬೇಕು ಎಂದರು.