ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ನೀಡಿದ್ದ ಭದ್ರತೆಯನ್ನು ತಗ್ಗಿಸಿ, ಶಿವಸೇನಾ ಶಾಸಕ ಆದಿತ್ಯ ಠಾಕ್ರೆಯ ಭದ್ರತೆಯನ್ನು‘ಜೆಡ್’ ಹಂತಕ್ಕೆ ಹೆಚ್ಚಿಸಲಾಗಿದೆ.
ಮಹಾರಾಷ್ಟ್ರದ ಬೆದರಿಕೆ ಗ್ರಹಿಕೆ ಸಮಿತಿಯ ವರದಿಯ ಅನ್ವಯ ಈ ಬದಲಾವಣೆಗಳನ್ನು ಮಾಡಲಾಗಿದೆ. ನಲವತ್ತಕ್ಕೂ ಹೆಚ್ಚು ಮಂದಿ ವಿಐಪಿಗಳಿಗೆ ಭದ್ರತೆ ಹಿಂಪಡೆಯಲಾಗಿದೆ. ಕೆಲವರಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಇನ್ನು ಕೆಲವರಿಗೆ ಹೊಸದಾಗಿ ಭದ್ರತೆ ನೀಡಲಾಗಿದೆ.
‘ಇಲ್ಲಿಯವರೆಗೆ ಸಚಿನ್ ತೆಂಡೂಲ್ಕರ್ ಅವರಿಗೆ ‘ಎಕ್ಸ್’ಭದ್ರತೆಯನ್ನು ಒದಗಿಸಲಾಗಿತ್ತು. ಇದರಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿಯನ್ನು ಅವರಿಗೆ ಕಾವಲಿಗೆ ನೀಡಲಾಗಿತ್ತು. ಈಗ ಅದನ್ನು ಹಿಂಪಡೆಯಲಾಗಿದೆ. ಆದರೆ ಪೊಲೀಸ್ ಎಸ್ಕಾರ್ಟ್ ವ್ಯವಸ್ಥೆ ಮುಂದುವರಿಯಲಿದೆ.‘ವೈ+’ಭದ್ರತೆಯಲ್ಲಿದ್ದ ಶಾಸಕ ಆದಿತ್ಯ ಠಾಕ್ರೆ ಅವರಿಗೆ ಇನ್ನು ಮುಂದೆ ‘ಜೆಡ್‘ ಭದ್ರತೆ ದೊರೆಲಿದೆ’ಎಂದು ಎಂದು ಗೃಹ ಇಲಾಖೆ ಅಧಿಕಾರಿಗಳು ತಿಳಿಸಿದರು.