ಗುರುವಾರ ಟ್ವೀಟ್ ಮಾಡಿರುವ ಅವರು, ‘ಇಂದಿಗೆ 45 ವರ್ಷಗಳ ಹಿಂದೆ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಭಾರತದ ಪ್ರಜಾಪ್ರಭುತ್ವದ ರಕ್ಷಣೆಗಾಗಿ ಹೋರಾಡಿದ, ಚಿತ್ರಹಿಂಸೆ ಅನುಭವಿಸಿದ ಎಲ್ಲರಿಗೂ ನನ್ನ ನಮನಗಳು’ ಎಂದು ಉಲ್ಲೇಖಿಸಿದ್ದಾರೆ. ಈ ಎಲ್ಲರ ತ್ಯಾಗ, ಹೋರಾಟವನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಮೋದಿ ಹೇಳಿದ್ದಾರೆ.