ಭೋಪಾಲ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್, ಮಾಲೇಗಾಂವ್ ಸ್ಫೋಟದ ಆರೋಪಿಯಾಗಿದ್ದಾರೆ.ತನ್ನ ವಿರುದ್ಧವಿರುವ ಪ್ರಕರಣದ ವಿಚಾರಣೆ ವೇಳೆ ಕರ್ಕರೆ ಸಿಕ್ಕಾಪಟ್ಟೆ ಕಿರುಕುಳ ನೀಡಿದ್ದರು.ಆಗ ನಾನು ನೀನು ಸರ್ವನಾಶ ಆಗುತ್ತೀಯಾ ಎಂದು ಶಪಿಸಿದ್ದೆ.ನನ್ನ ಶಾಪದಿಂದಾಗಿ ಕರ್ಕರೆ ಸತ್ತರು ಎಂದು ಹೇಳಿದ್ದರು.