ಎಸ್ಪಿಜಿ ಕಾಯ್ದೆ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಚರ್ಚೆ ವೇಳೆ ಡಿಎಂಕೆ ಸಂಸದ ಎ.ರಾಜಾ ಅವರು, ಮಹಾತ್ಮ ಗಾಂಧಿ ಹತ್ಯೆಗೆ ಕಾರಣವೇನೆಂದು ಗೋಡ್ಸೆ ನೀಡಿದ್ದ ಹೇಳಿಕೆಯೊಂದನ್ನು ಉಲ್ಲೇಖಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಪ್ರಜ್ಞಾ ಠಾಕೂರ್, ‘ದೇಶಭಕ್ತರೊಬ್ಬರ ಉದಾಹರಣೆಯನ್ನು ನೀವು ನೀಡುವಂತಿಲ್ಲ’ ಎಂದು ಹೇಳಿದರು.