ನವದೆಹಲಿ (): ಲಾಕ್ಡೌನ್ನ ಹಲವು ನಿರ್ಬಂಧಗಳನ್ನು ಸಡಿಲಿಸಿರುವುದರಿಂದ ಕಾರ್ಖಾನೆಗಳನ್ನು ಪುನರ್ ಆರಂಭಿಸುವಾಗ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವ ಕುರಿತು ಹೊಸ ನಿರ್ದೇಶನಗಳನ್ನು ಕೇಂದ್ರ ಸರ್ಕಾರ ಹೊರಡಿಸಿದೆ.
ವಿಶಾಖಪಟ್ಟಣದಲ್ಲಿ ಅನಿಲ ಸೋರಿಕೆಯಿಂದ 11 ಮಂದಿ ಮೃತಪಟ್ಟಿದ್ದರಿಂದ ಸರ್ಕಾರ ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈ ಸೂಚನೆಗಳನ್ನು ನೀಡಿದೆ.
ಮೊದಲ ವಾರ ಪರೀಕ್ಷಾರ್ಥ ಕಾರ್ಖಾನೆ ಅರಂಭಿಸಬೇಕು. ಈ ಅವಧಿಯಲ್ಲಿ ಅತಿ ಹೆಚ್ಚಿನ ಉತ್ಪಾದನೆಯ ಗುರಿಯನ್ನು ಇರಿಸಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ (ಎನ್ಡಿಎಂಎ) ಹೊರಡಿಸಿರುವ ನಿರ್ದೇಶನದಲ್ಲಿ ತಿಳಿಸಲಾಗಿದೆ.
ಲಾಕ್ಡೌನ್ನಿಂದ ಪೈಪ್ಲೈನ್, ವಾಲ್ವ್ಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ರಾಸಾಯನಿಕಗಳ ಅಂಶಗಳು ಉಳಿದಿರುವ ಸಾಧ್ಯತೆಗಳಿವೆ. ಈ ರಾಸಾಯನಿಕ ಅಂಶಗಳು ಮತ್ತು ತ್ಯಾಜ್ಯಗಳು ಅಪಾಯ ಸೃಷ್ಟಿಸಬಹುದಾಗಿದ್ದರಿಂದ ಎಚ್ಚರ ಅಗತ್ಯ ಎಂದು ತಿಳಿಸಿದೆ.
ಕಾರ್ಖಾನೆಗಳ ಮರುಆರಂಭಕ್ಕೆ ಮುನ್ನ ಇಡೀ ಘಟಕವನ್ನು ಸುರಕ್ಷತೆಯ ಪರಿಶೀಲನೆಗೆ ಒಳಪಡಿಸಬೇಕು. ಕಾರ್ಖಾನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸುವುದನ್ನು ಗ್ರಹಿಸುವ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.