<p><strong>ನವದೆಹಲಿ (): </strong>ಲಾಕ್ಡೌನ್ನ ಹಲವು ನಿರ್ಬಂಧಗಳನ್ನು ಸಡಿಲಿಸಿರುವುದರಿಂದ ಕಾರ್ಖಾನೆಗಳನ್ನು ಪುನರ್ ಆರಂಭಿಸುವಾಗ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವ ಕುರಿತು ಹೊಸ ನಿರ್ದೇಶನಗಳನ್ನು ಕೇಂದ್ರ ಸರ್ಕಾರ ಹೊರಡಿಸಿದೆ.</p>.<p><strong>ಸಂಪಾದಕೀಯ:<a href="https://www.prajavani.net/op-ed/editorial/editorial-on-factories-reopen-amid-of-covid-19-pandemic-726271.html">ಕಾರ್ಖಾನೆಗಳ ಪುನರಾರಂಭದ ಹೊತ್ತಲ್ಲಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಿ</a></strong></p>.<p>ವಿಶಾಖಪಟ್ಟಣದಲ್ಲಿ ಅನಿಲ ಸೋರಿಕೆಯಿಂದ 11 ಮಂದಿ ಮೃತಪಟ್ಟಿದ್ದರಿಂದ ಸರ್ಕಾರ ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈ ಸೂಚನೆಗಳನ್ನು ನೀಡಿದೆ.</p>.<p>ಮೊದಲ ವಾರ ಪರೀಕ್ಷಾರ್ಥ ಕಾರ್ಖಾನೆ ಅರಂಭಿಸಬೇಕು. ಈ ಅವಧಿಯಲ್ಲಿ ಅತಿ ಹೆಚ್ಚಿನ ಉತ್ಪಾದನೆಯ ಗುರಿಯನ್ನು ಇರಿಸಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ (ಎನ್ಡಿಎಂಎ) ಹೊರಡಿಸಿರುವ ನಿರ್ದೇಶನದಲ್ಲಿ ತಿಳಿಸಲಾಗಿದೆ.</p>.<p>ಲಾಕ್ಡೌನ್ನಿಂದ ಪೈಪ್ಲೈನ್, ವಾಲ್ವ್ಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ರಾಸಾಯನಿಕಗಳ ಅಂಶಗಳು ಉಳಿದಿರುವ ಸಾಧ್ಯತೆಗಳಿವೆ. ಈ ರಾಸಾಯನಿಕ ಅಂಶಗಳು ಮತ್ತು ತ್ಯಾಜ್ಯಗಳು ಅಪಾಯ ಸೃಷ್ಟಿಸಬಹುದಾಗಿದ್ದರಿಂದ ಎಚ್ಚರ ಅಗತ್ಯ ಎಂದು ತಿಳಿಸಿದೆ.</p>.<p>ಕಾರ್ಖಾನೆಗಳ ಮರುಆರಂಭಕ್ಕೆ ಮುನ್ನ ಇಡೀ ಘಟಕವನ್ನು ಸುರಕ್ಷತೆಯ ಪರಿಶೀಲನೆಗೆ ಒಳಪಡಿಸಬೇಕು. ಕಾರ್ಖಾನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸುವುದನ್ನು ಗ್ರಹಿಸುವ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (): </strong>ಲಾಕ್ಡೌನ್ನ ಹಲವು ನಿರ್ಬಂಧಗಳನ್ನು ಸಡಿಲಿಸಿರುವುದರಿಂದ ಕಾರ್ಖಾನೆಗಳನ್ನು ಪುನರ್ ಆರಂಭಿಸುವಾಗ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳುವ ಕುರಿತು ಹೊಸ ನಿರ್ದೇಶನಗಳನ್ನು ಕೇಂದ್ರ ಸರ್ಕಾರ ಹೊರಡಿಸಿದೆ.</p>.<p><strong>ಸಂಪಾದಕೀಯ:<a href="https://www.prajavani.net/op-ed/editorial/editorial-on-factories-reopen-amid-of-covid-19-pandemic-726271.html">ಕಾರ್ಖಾನೆಗಳ ಪುನರಾರಂಭದ ಹೊತ್ತಲ್ಲಿ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಿ</a></strong></p>.<p>ವಿಶಾಖಪಟ್ಟಣದಲ್ಲಿ ಅನಿಲ ಸೋರಿಕೆಯಿಂದ 11 ಮಂದಿ ಮೃತಪಟ್ಟಿದ್ದರಿಂದ ಸರ್ಕಾರ ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಈ ಸೂಚನೆಗಳನ್ನು ನೀಡಿದೆ.</p>.<p>ಮೊದಲ ವಾರ ಪರೀಕ್ಷಾರ್ಥ ಕಾರ್ಖಾನೆ ಅರಂಭಿಸಬೇಕು. ಈ ಅವಧಿಯಲ್ಲಿ ಅತಿ ಹೆಚ್ಚಿನ ಉತ್ಪಾದನೆಯ ಗುರಿಯನ್ನು ಇರಿಸಿಕೊಳ್ಳಬಾರದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ (ಎನ್ಡಿಎಂಎ) ಹೊರಡಿಸಿರುವ ನಿರ್ದೇಶನದಲ್ಲಿ ತಿಳಿಸಲಾಗಿದೆ.</p>.<p>ಲಾಕ್ಡೌನ್ನಿಂದ ಪೈಪ್ಲೈನ್, ವಾಲ್ವ್ಗಳಲ್ಲಿ ಮತ್ತು ಇತರ ಸ್ಥಳಗಳಲ್ಲಿ ರಾಸಾಯನಿಕಗಳ ಅಂಶಗಳು ಉಳಿದಿರುವ ಸಾಧ್ಯತೆಗಳಿವೆ. ಈ ರಾಸಾಯನಿಕ ಅಂಶಗಳು ಮತ್ತು ತ್ಯಾಜ್ಯಗಳು ಅಪಾಯ ಸೃಷ್ಟಿಸಬಹುದಾಗಿದ್ದರಿಂದ ಎಚ್ಚರ ಅಗತ್ಯ ಎಂದು ತಿಳಿಸಿದೆ.</p>.<p>ಕಾರ್ಖಾನೆಗಳ ಮರುಆರಂಭಕ್ಕೆ ಮುನ್ನ ಇಡೀ ಘಟಕವನ್ನು ಸುರಕ್ಷತೆಯ ಪರಿಶೀಲನೆಗೆ ಒಳಪಡಿಸಬೇಕು. ಕಾರ್ಖಾನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸುವುದನ್ನು ಗ್ರಹಿಸುವ ಬಗ್ಗೆ ಸಿಬ್ಬಂದಿಗೆ ತರಬೇತಿ ನೀಡಬೇಕು ಎಂದು ಸೂಚಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>