ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿತ್ರೋಡಾ ಕ್ಷಮೆ ಕೇಳಬೇಕು: ರಾಹುಲ್‌

Last Updated 13 ಮೇ 2019, 19:32 IST
ಅಕ್ಷರ ಗಾತ್ರ

ಖನ್ನಾ (ಪಂಜಾಬ್‌): ಕಾಂಗ್ರೆಸ್ ಮುಖಂಡ ಸ್ಯಾಮ್‌ ಪಿತ್ರೋಡಾ ಅವರು ಸಿಖ್‌ ಗಲಭೆಯ ಬಗ್ಗೆ ನೀಡಿದ ಹೇಳಿಕೆಗೆ ಅವರಿಗೆ ನಾಚಿಕೆಯಾಗಬೇಕು, ಅವರು ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ಫತೇಗಡ ಸಾಹಿಬ್‌ ಮೀಸಲು ಕ್ಷೇತ್ರದ ಅಭ್ಯರ್ಥಿ ಅಮರ್‌ ಸಿಂಗ್‌ ಪರವಾಗಿ ರಾಹುಲ್‌ ಅವರು ಚುನಾವಣಾ ಪ್ರಚಾರ ಭಾಷಣ ಮಾಡಿದರು.

‘1984ರ ಗಲಭೆ ಬಗ್ಗೆ ಸ್ಯಾಮ್‌ ಪಿತ್ರೋಡಾ ಹೇಳಿಕೆ ಸಂಪೂರ್ಣ ತಪ್ಪು. ಈ ಹೇಳಿಕೆಗಾಗಿ ಅವರು ದೇಶದ ಕ್ಷಮೆ ಕೇಳಬೇಕು. ನಾನು ಇದನ್ನು ಸಾರ್ವಜನಿಕವಾಗಿ ಹೇಳುತ್ತಿದ್ದೇನೆ. ಇದನ್ನು ಅವರಿಗೆ ಫೋನ್‌ ಮೂಲಕವೂ ಹೇಳಿದ್ದೇನೆ’ ಎಂದು ರಾಹುಲ್‌ ಹೇಳಿದರು.

‘1984ರಲ್ಲಿ ಆಗಿದ್ದು ಆಗಿ ಹೋಗಿದೆ’ ಎಂದು ಮಾಧ್ಯಮದ ಜತೆ ಮಾತನಾಡುತ್ತಾ ಪಿತ್ರೋಡಾ ಅವರು ಇತ್ತೀಚೆಗೆ ಹೇಳಿದ್ದರು. ಇದಕ್ಕೆ ಬಿಜೆಪಿಯಿಂದ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT