ನವದೆಹಲಿ: ಕರಾವಳಿ ನಿಯಂತ್ರಣ ವಲಯ (ಸಿಆರ್ಝಡ್)ದ ವ್ಯಾಪ್ತಿಯಲ್ಲಿ ಮರಳು ಗಣಿಗಾರಿಕೆ ನಡೆಸಲು ನಿಯಮಾನುಸಾರ ಅನುಮತಿ ನೀಡುವ ಮೂಲಕ ಮರಳು ಬಿಕ್ಕಟ್ಟು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.
2011ರ ನವೆಂಬರ್ 8ಕ್ಕೆ ಮೊದಲೇ ಸಾಂಪ್ರದಾಯಿಕ ಪದ್ಧತಿಯಡಿ ಮರಳು ಗಣಿಗಾರಿಕೆಯಲ್ಲಿ ತೊಡಗದ ಸಮುದಾಯಗಳಿಗೂ ಆದ್ಯತೆಯ ಮೇರೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳ ಬಹುದಾಗಿದೆ ಎಂದು ಕೇಂದ್ರದ ಪರಿಸರ ಮತ್ತು ಅರಣ್ಯ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ತಿಳಿಸಿದೆ.