ರಾಜೀವ್ಕುಮಾರ್ ಅವರನ್ನು ಬಂಧಿಸದಂತೆ ಫೆಬ್ರುವರಿ 5ರಂದು ನ್ಯಾಯಾಲಯ ನೀಡಿರುವ ಆದೇಶವನ್ನು ಬದಲಾಯಿಸುವಂತೆ ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಿಂಘ್ವಿ ಈ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಡೈರಿ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ತನಿಖಾಧಿಕಾರಿಗಳ ಹೇಳಿಕೆಗಳನ್ನು ಮಂಡಿಸಿದ ಸಾಲಿಸಿಟರಲ್ ಜನರಲ್ ತುಷಾರ್ ಮೆಹ್ತಾ, ‘ತಾವು ಬಯಸಿದಂತೆಯೇ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಜೀವ್ ಕುಮಾರ್ ಸೂಚನೆ ನೀಡುತ್ತಿದ್ದರು’ ಎಂದು ದೂರಿದರು.