ಅಲಿಗಡ (ಉತ್ತರ ಪ್ರದೇಶ): ಖ್ಯಾತ ಉರ್ದು ಕವಿ ಮುನವ್ವರ್ ರಾಣಾ ಅವರ ಪುತ್ರಿ, ಸಾಮಾಜಿಕ ಹೋರಾಟಗಾರ್ತಿ ಸುಮೈಯಾರಾಣಾ ‘ಪಾಕಿಸ್ತಾನಕ್ಕೆ ಹೋಗಲಿ’ ಎಂದುಅಲಿಗಡದ ಸಂಸದ ಸತೀಶ್ ಗೌತಮ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ಶನಿವಾರ ಪೌರತ್ವ (ತಿದ್ದುಪಡಿ) ಕಾಯ್ದೆಯ(ಸಿಎಎ) ವಿರುದ್ಧ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ್ದ ಸುಮೈಯಾ, ‘ಪ್ರತಿಭಟನೆಯನ್ನು ಹತ್ತಿಕ್ಕಲು ಉತ್ತರ ಪ್ರದೇಶ ಪೊಲೀಸರು ದಬ್ಬಾಳಿಕೆಯ ಕ್ರಮಗಳನ್ನು ಪ್ರಯೋಗಿಸುತ್ತಿದ್ದಾರೆ. ಇಂಥ ಕ್ರಮಗಳು ಉಸಿರುಗಟ್ಟಿಸುವಂತಿವೆ’ ಎಂದು ಹೇಳಿದ್ದರು