ಕೆಲವು ದಿನಗಳ ಹಿಂದೆ ಕರ್ಫ್ಯೂ ಹಿಂಪಡೆದಿದ್ದು, ಜನ ಜೀವನ ಯಥಾಸ್ಥಿತಿಗೆ ಮರಳುತ್ತಿದೆ ಎಂದು ಸಭೆಯಲ್ಲಿ ವಿವರಣೆ ನೀಡಲಾಗಿದೆ. ನಗರ ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆ 13 ಹಂತಗಳಲ್ಲಿ ನಡೆಯಲಿದ್ದು, ಶಾಂತಿಯುತ ಮತದಾನಕ್ಕಾಗಿ ಸಿಆರ್ಪಿಎಫ್ ಪಡೆಯನ್ನು ನಿಯೋಜಿಸಲಾಗಿದೆ.ಪುಲ್ವಾಮ ದಾಳಿ ನಂತರ ಇಲ್ಲಿ ಭದ್ರತೆ ಹೆಚ್ಚಿಸಿದ್ದು, ಚುನಾವಣಾ ವೇಳೆ ಉಗ್ರರು ಯಾವುದೇ ಕೃತ್ಯವೆಸಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ವಕ್ತಾರರು ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.