ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಲ್ಲಿ ಸೌದಿ ದೊರೆ; ಉಭಯ ರಾಷ್ಟ್ರಗಳ ಸಂಬಂಧದಲ್ಲಿ ’ಹೊಸ ಅಧ್ಯಾಯ’

Last Updated 20 ಫೆಬ್ರುವರಿ 2019, 2:30 IST
ಅಕ್ಷರ ಗಾತ್ರ

ನವದೆಹಲಿ: ಸೌದಿ ಅರೇಬಿಯಾದ ರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಮಂಗಳವಾರ ರಾತ್ರಿ ಭಾರತಕ್ಕೆ ಬಂದಿದ್ದು, ಎರಡು ದಿನಗಳ ಪ್ರವಾಸದಲ್ಲಿರಲಿದ್ದಾರೆ. ಭಯೋತ್ಪಾದನೆ ವಿರುದ್ಧ ಗಟ್ಟಿ ಸಂದೇಶ ರವಾನಿಸುವುದು ಹಾಗೂ ಉಭಯ ರಾಷ್ಟ್ರಗಳ ಸಂಬಂಧ ವೃದ್ಧಿಗಾಗಿ ಹಲವು ಪಾಲುದಾರಿಕೆ ಒಪ್ಪಂದಗಳು ನಡೆಯುವ ಸಾಧ್ಯತೆಯಿದೆ.

ರಾಷ್ಟ್ರರಾಜಧಾನಿ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಲ್ಮಾನ್‌ ಅವರನ್ನು ಬರಮಾಡಿಕೊಂಡರು. ಸೌದಿ ದೊರೆಯನ್ನು ಸ್ವಾಗತಿಸಿದ ನಂತರ ಮೋದಿ ಫೋಟೊ ಸಹಿತ ಸಂದೇಶ ಟ್ವೀಟಿಸಿದ್ದಾರೆ. ಸೌದಿ ದೊರೆ ವಿಮಾನದಿಂದ ಇಳಿಯುತ್ತಿದ್ದಂತೆ ಪ್ರಧಾನಿ ಮೋದಿ ಎಂದಿನ ಶೈಲಿಯಲ್ಲಿ ಅಪ್ಪುಗೆಯೊಂದಿಗೆ ಸ್ವಾಗತಿಸಿದರು.

ಇದೇ ಮೊದಲ ಬಾರಿಗೆ ಸೌದಿ ದೊರೆ ಸಲ್ಮಾನ್‌ ಭಾರತ ಭೇಟಿ ನೀಡುತ್ತಿದ್ದು, ಉಭಯ ರಾಷ್ಟ್ರಗಳ ನಡುವಿನ ಸಂಬಂಧದಲ್ಲಿ ಇದೊಂದು ಹೊಸ ಅಧ್ಯಾಯದ ಆರಂಭ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್‌ ಕುಮಾರ್‌ಹೇಳಿಕೊಂಡಿದ್ದಾರೆ.

ಪಾಕಿಸ್ತಾನ ಭೇಟಿಯ ಮೂಲಕ ದಕ್ಷಿಣ ಏಷ್ಯಾ ಪ್ರವಾಸ ಆರಂಭಿಸಿದ ಸಲ್ಮಾನ್‌, ಭಾರತ ಪ್ರವಾಸದ ಬಳಿಕ ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಪುಲ್ವಾಮಾದಲ್ಲಿ ನಡೆದ ದಾಳಿಯ ಬಳಿಕ ಭಾರತ–ಪಾಕಿಸ್ತಾನ ನಡುವೆ ಉದ್ಭವಿಸಿರುವ ಆತಂಕದ ವಾತಾವರಣ ಸಲ್ಮಾನ್‌ ಭೇಟಿಯಿಂದ ತಿಳಿಯಾಗಬಹುದು ಎಂದೂ ವಿಶ್ಲೇಷಿಸಲಾಗುತ್ತಿದೆ.

ಎಂಬಿಎಸ್‌ ಎಂದೇ ಕರೆಸಿಕೊಳ್ಳುವ ಸಲ್ಮಾನ್‌, ಪಾಕಿಸ್ತಾನದಲ್ಲಿ ₹1.42 ಲಕ್ಷ ಕೋಟಿ ಮೌಲ್ಯದ ಹೂಡಿಕೆ ಸೇರಿ ಹಲವು ಒಪ್ಪಂದಗಳಿಗೆ ಸಹಿ ಹಾಕಿದ್ದರು. ಪಾಕಿಸ್ತಾನದಿಂದ ಸೌದಿ ಅರೇಬಿಯಾಗೆ ಮರಳಿ ಕೆಲವು ಗಂಟೆ ಮನೆಯಲ್ಲಿ ಕಳೆದು, 3 ಸಾವಿರ ಕಿ.ಮೀ. ಪ್ರಯಾಣದ ಮೂಲಕ ಭಾರತಕ್ಕೆ ಬಂದಿದ್ದಾರೆ. ಬಂಡಾವಾಳ ಹೂಡಿಕೆ, ಪ್ರವಾಸ, ವಸತಿ ಹಾಗೂ ಪ್ರಸಾರಕ್ಕೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳು ಐದು ಒಪ್ಪಂದಗಳನ್ನು ಮಾಡಿಕೊಳ್ಳಲಿವೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಬುಧವಾರ ರಾತ್ರಿ 11:50ಕ್ಕೆ ಸೌದಿ ದೊರೆ ಸಲ್ಮಾನ್‌ ಭಾರತದಿಂದ ಹೊರಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT