‘ಶೇ 90ರಷ್ಟು ಮಹಿಳೆಯರು ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸಿದ್ದಾರೆ. ಋತುಮತಿಯಾಗುವ ವಯಸ್ಸಿನಲ್ಲಿ ಮಹಿಳೆ ದೇವಸ್ಥಾನ ಪ್ರವೇಶಿಸುವುದು ಸರಿಯಲ್ಲಾ ಎಂದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮ್ಮ ಪಕ್ಷ ಸುಪ್ರೀಂಕೋರ್ಟ್ ತೀರ್ಪನ್ನು ವಿರೋಧಿಸುತ್ತಿಲ್ಲ. ಆದರೆ, ದೇವರ ಬಗೆಗೆ ಜನರಿಗಿರುವ ಭಾವನೆಯನ್ನು ಗೌರವಿಸಬೇಕು. ಕೇರಳ ಸರ್ಕಾರ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕು’ ಎಂದು ಹೇಳಿದರು.