ಗಲಭೆಗೆ ಸಂಬಂಧಿಸಿ ಮಾವ್ಕಾರ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಪೊಲೀಸರು ಸ್ಥಳಾಂತರಿಸಲು ಯತ್ನಿಸುತ್ತಿದ್ದಾಗ ಘರ್ಷಣೆ ನಡೆದಿದೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ವಾಹನಕ್ಕೆ ಹಾನಿ ಎಸಗಿ, ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದಿದ್ದಾರೆ. ಹಿಂಸಾಚಾರದಿಂದಾಗಿ ನಾಲ್ಕನೇ ದಿನವೂ ಜನಜೀವನ ಅಸ್ತವ್ಯಸ್ತವಗಿದ್ದು, ಲುಂಬ್ದಿಂಗ್ಜ್ರಿ ಮತ್ತು ಕಂಟೋನ್ಮೆಂಟ್ ಪ್ರದೇಶದಲ್ಲಿ ನಿಷೇಧಾಜ್ಞೆ ಹೇರಲಾಗಿದೆ.