‘ಬಂಡೀಪುರ ಅರಣ್ಯ ಪ್ರದೇಶದ ಕುಂದಕೆರೆ ವಲಯದಲ್ಲಿ ಫೆಬ್ರುವರಿ 23ರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಮದ್ದೂರು ಮತ್ತು ಗೋಪಾಲಸ್ವಾಮಿ ಬೆಟ್ಟ ಅರಣ್ಯ ವಲಯಗಳಿಗೂ ಚಾಚಿಕೊಂಡಿದೆ. ಒಟ್ಟು 874 ಚದರ ಕಿಲೋ ಮೀಟರ್ ವ್ಯಾಪ್ತಿಯ ಅರಣ್ಯದಲ್ಲಿ 8,000 ಎಕರೆಗೂ ಅಧಿಕ ಅರಣ್ಯ ಬೆಂಕಿಯ ಕೆನ್ನಾಲಗೆಗೆ ಆಹುತಿಯಾಗಿದೆ. ದುಷ್ಕರ್ಮಿಗಳೇ ಬೆಂಕಿ ಹಚ್ಚಿರುವುದು ಅರಣ್ಯ ಇಲಾಖೆ ಅಧಿಕಾರಿಗಳಿಂದ ದೃಢಪಟ್ಟಿದೆ’ ಎಂದು ಮಾಹಿತಿ ನೀಡಲಾಗಿದೆ.