ಈ ಇಬ್ಬರು ನ್ಯಾಯಮೂರ್ತಿಗಳಿಗೆ ಪದನ್ನೋತಿ ನೀಡುವ ಸಂಬಂಧ ಕೇಂದ್ರ ಸರ್ಕಾರ ಎತ್ತಿದ್ದ ಆಕ್ಷೇಪವನ್ನು ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಕೊಲಿಜಿಯಂ ತಿರಸ್ಕರಿಸಿದ್ದು, ’ಉಭಯ ನ್ಯಾಯಮೂರ್ತಿಗಳ ಸಾಮರ್ಥ್ಯ, ನಡವಳಿಕೆ ಹಾಗೂ ಪ್ರಾಮಾಣಿಕತೆಗೆ ಕುಂದು ತರುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ‘ ಎಂದು ಪ್ರತಿಪಾದಿಸಿದೆ.