ನವದೆಹಲಿ: ನ್ಯಾಯಾಧೀಶ ಪಿ. ಕೃಷ್ಣ ಭಟ್ ಅವರನ್ನು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ನ ಕೊಲಿಜಿಯಂ, ಕೇಂದ್ರ ಸರ್ಕಾರವನ್ನು ಕೋರಿದೆ. ಭಟ್ ಅವರನ್ನು ನ್ಯಾಯಮೂರ್ತಿಯಾಗಿ ನೇಮಿಸುವ ಶಿಫಾರಸನ್ನು ಕೇಂದ್ರವು ಎರಡನೇ ಬಾರಿ ವಾಪಸ್ ಕಳುಹಿಸಿದೆ.