ನವದೆಹಲಿ: ಇರಾನ್ನಲ್ಲಿ ಸಿಲುಕಿರುವ 250 ಭಾರತೀಯರಲ್ಲಿ ಕೋವಿಡ್–19 ಇರುವುದು ದೃಢಪಟ್ಟಿದ್ದು, ಅತ್ಯುತ್ತಮ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
500 ಮಂದಿಯನ್ನು ವಾಪಸ್ ಕರೆತರಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.
250 ಯಾತ್ರಾರ್ಥಿಗಳನ್ನುವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಲಡಾಖ್ನ ನಿವಾಸಿ ಮುಸ್ತಾಫಾ ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್ಗೆ ಸರ್ಕಾರ ತಿಳಿಸಿದೆ.