ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಬೀಡಾದ ಮಲೆನಾಡೇ ಈ ಬಾರಿ ವರುಣನ ರೌದ್ರಾವತಾರಕ್ಕೆ ಬೆಚ್ಚಿಬಿದ್ದಿದೆ. ಗುಡ್ಡಗಳು ಕುಸಿದು ರಸ್ತೆಗಳು ಮುಚ್ಚಿಹೋಗುತ್ತಿವೆ. ತುಂಗಾ, ಭದ್ರಾ,ನೇತ್ರಾವತಿ ನದಿಗಳ ನೀರು ಕೆಂಬಣ್ಣಕ್ಕೆ ತಿರುಗಿದೆ.ನದಿ ತೀರದ ನಗರ, ಪಟ್ಟಣ, ಹಳ್ಳಿಗಳ ತ್ಯಾಜ್ಯ ವಸ್ತುಗಳನ್ನೆಲ್ಲಾ ಹೇರಿಕೊಂಡು ನೀರು ಜನವಸತಿ ಪ್ರದೇಶಗಳತ್ತ ನುಗ್ಗುತ್ತಿದೆ.