2017ರ ಮೇ 17ರಿಂದ ಡಿಸೆಂಬರ್ 29ರವರೆಗೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು 2018ರ ಮಾರ್ಚ್ 19ರಂದು ರಾಜ್ಯ ಹೈಕೋರ್ಟ್ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಎಸ್.ಪಿ. ಸಕ್ಕರಿ ಮತ್ತಿತರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಬಡ್ತಿಯಲ್ಲಿ ಮೀಸಲಾತಿ ಅನುಸರಿಸುವ ರಾಜ್ಯ ಸರ್ಕಾರದ ಕಾಯ್ದೆಯನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ 2017ರ ಫೆಬ್ರುವರಿ 9ರಂದು ಹೊರಡಿಸಿದ್ದ ಆದೇಶಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರ ಜ್ಯೇಷ್ಠತಾ ಪಟ್ಟಿಯ ಪರಿಷ್ಕರಣೆಯ ಆದೇಶ ಜಾರಿ ಮಾಡಿತ್ತು.