ವಿದ್ಯಾರ್ಥಿಗಳು ಹಾಗೂ ಕಾರ್ಮಿಕರಿಂದ ಮನೆ ಮಾಲೀಕರು ಬಾಡಿಗೆ ಕೇಳುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ವಕೀಲರಾದ ಪವನ್ ಪ್ರಕಾಶ್ ಹಾಗೂ ಎ.ಕೆ.ಪಾಂಡೆ ಅರ್ಜಿ ಸಲ್ಲಿಸಿದ್ದರು. ‘ಮನೆ ಖಾಲಿ ಮಾಡುವಂತೆ ಒತ್ತಾಯಿಸುವ ಮನೆ ಮಾಲೀಕರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು’ ಎಂದುಮಾರ್ಚ್ 29ರಂದು ಗೃಹ ಸಚಿವಾಲಯ ಹೊರಡಿಸಿದ ಆದೇಶವನ್ನು ಅಂಗೀಕರಿಸಬೇಕು ಎಂದೂ ಅರ್ಜಿದಾರರು ಕೇಳಿಕೊಂಡಿದ್ದರು.