<p><strong>ನವದೆಹಲಿ:</strong> ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಹಾಗೂ ಚಾರ್ಜಿಂಗ್ ಸೌಲಭ್ಯ ಒದಗಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಲು ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠ ಆಶಯ ವ್ಯಕ್ತಪಡಿಸಿದೆ.</p>.<p>ಎಲೆಕ್ಟ್ರಿಕ್ ವಾಹನಗಳ ನೀತಿ ಜಾರಿಮಾಡುವ ನಿರ್ಧಾರ ಪ್ರಶ್ನಿಸಿ ಸಿಪಿಐಎಲ್ ಎಂಬ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸಿಜೆಐ ಬೊಬಡೆ ಈ ಆಶಯ ವ್ಯಕ್ತಪಡಿಸಿದರು. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ ಈ ಪೀಠದಲ್ಲಿದ್ದಾರೆ.</p>.<p>‘ಪ್ರಸ್ತುತ ಬಳಕೆಯಲ್ಲಿರುವ ಇಂಧನದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಸಮಸ್ಯೆ ರಾಷ್ಟ್ರ ರಾಜಧಾನಿ ಮಾತ್ರವಲ್ಲ ಇಡೀ ದೇಶವನ್ನೇ ಬಾಧಿಸುತ್ತಿದೆ. ಇನ್ನೊಂದೆಡೆ, ಸರ್ಕಾರಿ ಮತ್ತು ಖಾಸಗಿ ವಾಹನಗಳಿಗೆ ಪರ್ಯಾಯ ಇಂಧನ ಬಳಸುವ ಬಗ್ಗೆ ಸಚಿವ ಗಡ್ಕರಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರೊಂದಿಗೆ ಸಂವಾದ ನಡೆಸಲು ಕೋರ್ಟ್ ಉತ್ಸುಕವಾಗಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಸಾಲಿಸಿಟರ್ ಜನರಲ್ ಎ.ಎನ್.ಎಸ್.ನಾಡಕರ್ಣಿ ಅವರಿಗೆ ಈ ಪ್ರಶ್ನೆ ಕೇಳಿದ ಸಿಜೆಐ ಬೊಬಡೆ, ‘ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಕೋರ್ಟ್ಗೆ ನೆರವಾಗುವ ದೃಷ್ಟಿಯಿಂದ ಸಚಿವರು ಬರುವರೇ’ ಎಂದರು.</p>.<p>ಈ ಮಾತಿಗೆ ಸಹಮತ ವ್ಯಕ್ತಪಡಿಸದ ನಾಡಕರ್ಣಿ, ‘ರಾಜಕಾರಣಿಗಳು ಕೋರ್ಟ್ಗೆ ಹಾಜರಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಒಂದು ವೇಳೆ ಸಚಿವರು ಸುಪ್ರೀಂಕೋರ್ಟ್ಗೆ ಹಾಜರಾದರೆ, ಇದೇ ವಿಷಯವನ್ನು ವಿರೋಧ ಪಕ್ಷಗಳು ರಾಜಕೀಯ ಉದ್ದೇಶ<br />ಗಳಿಗೆ ದುರ್ಬಳಕೆ ಮಾಡಿಕೊಳ್ಳುವ ಅಪಾಯ ಇದೆ’ ಎಂದರು.</p>.<p>‘ಅರ್ಜಿದಾರರ ಪರ ವಕೀಲ ಪ್ರಶಾಂತ ಭೂಷಣ್ ಸಹ ಒಬ್ಬ ರಾಜಕಾರಣಿ ಎಂಬುದು ಗೊತ್ತು. ಆದರೆ, ಸಚಿವರೊಂದಿಗೆ ಅವರು ವಾಗ್ವಾದ ಮಾಡಲ್ಲ’ ಎಂದು ನ್ಯಾಯಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಹಾಗೂ ಚಾರ್ಜಿಂಗ್ ಸೌಲಭ್ಯ ಒದಗಿಸುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಲು ಸುಪ್ರೀಂಕೋರ್ಟ್ನ ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ನ್ಯಾಯಪೀಠ ಆಶಯ ವ್ಯಕ್ತಪಡಿಸಿದೆ.</p>.<p>ಎಲೆಕ್ಟ್ರಿಕ್ ವಾಹನಗಳ ನೀತಿ ಜಾರಿಮಾಡುವ ನಿರ್ಧಾರ ಪ್ರಶ್ನಿಸಿ ಸಿಪಿಐಎಲ್ ಎಂಬ ಸ್ವಯಂಸೇವಾ ಸಂಸ್ಥೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಸಿಜೆಐ ಬೊಬಡೆ ಈ ಆಶಯ ವ್ಯಕ್ತಪಡಿಸಿದರು. ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ, ಸೂರ್ಯಕಾಂತ ಈ ಪೀಠದಲ್ಲಿದ್ದಾರೆ.</p>.<p>‘ಪ್ರಸ್ತುತ ಬಳಕೆಯಲ್ಲಿರುವ ಇಂಧನದಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಸಮಸ್ಯೆ ರಾಷ್ಟ್ರ ರಾಜಧಾನಿ ಮಾತ್ರವಲ್ಲ ಇಡೀ ದೇಶವನ್ನೇ ಬಾಧಿಸುತ್ತಿದೆ. ಇನ್ನೊಂದೆಡೆ, ಸರ್ಕಾರಿ ಮತ್ತು ಖಾಸಗಿ ವಾಹನಗಳಿಗೆ ಪರ್ಯಾಯ ಇಂಧನ ಬಳಸುವ ಬಗ್ಗೆ ಸಚಿವ ಗಡ್ಕರಿ ಮಾತನಾಡುತ್ತಿದ್ದಾರೆ. ಹೀಗಾಗಿ ಅವರೊಂದಿಗೆ ಸಂವಾದ ನಡೆಸಲು ಕೋರ್ಟ್ ಉತ್ಸುಕವಾಗಿದೆ’ ಎಂದು ಹೇಳಿದರು.</p>.<p>ಹೆಚ್ಚುವರಿ ಸಾಲಿಸಿಟರ್ ಜನರಲ್ ಎ.ಎನ್.ಎಸ್.ನಾಡಕರ್ಣಿ ಅವರಿಗೆ ಈ ಪ್ರಶ್ನೆ ಕೇಳಿದ ಸಿಜೆಐ ಬೊಬಡೆ, ‘ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಈ ಸಂಬಂಧ ಕೋರ್ಟ್ಗೆ ನೆರವಾಗುವ ದೃಷ್ಟಿಯಿಂದ ಸಚಿವರು ಬರುವರೇ’ ಎಂದರು.</p>.<p>ಈ ಮಾತಿಗೆ ಸಹಮತ ವ್ಯಕ್ತಪಡಿಸದ ನಾಡಕರ್ಣಿ, ‘ರಾಜಕಾರಣಿಗಳು ಕೋರ್ಟ್ಗೆ ಹಾಜರಾಗುವುದರಲ್ಲಿ ಯಾವುದೇ ತಪ್ಪಿಲ್ಲ. ಒಂದು ವೇಳೆ ಸಚಿವರು ಸುಪ್ರೀಂಕೋರ್ಟ್ಗೆ ಹಾಜರಾದರೆ, ಇದೇ ವಿಷಯವನ್ನು ವಿರೋಧ ಪಕ್ಷಗಳು ರಾಜಕೀಯ ಉದ್ದೇಶ<br />ಗಳಿಗೆ ದುರ್ಬಳಕೆ ಮಾಡಿಕೊಳ್ಳುವ ಅಪಾಯ ಇದೆ’ ಎಂದರು.</p>.<p>‘ಅರ್ಜಿದಾರರ ಪರ ವಕೀಲ ಪ್ರಶಾಂತ ಭೂಷಣ್ ಸಹ ಒಬ್ಬ ರಾಜಕಾರಣಿ ಎಂಬುದು ಗೊತ್ತು. ಆದರೆ, ಸಚಿವರೊಂದಿಗೆ ಅವರು ವಾಗ್ವಾದ ಮಾಡಲ್ಲ’ ಎಂದು ನ್ಯಾಯಪೀಠ ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>