ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ಣಬ್ ಗೋಸ್ವಾಮಿಗೆ ರಕ್ಷಣೆ ಮುಂದುವರಿಸಿದ ಸುಪ್ರೀಂ

Last Updated 11 ಮೇ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ರಿಪಬ್ಲಿಕ್‌ ಟಿವಿ ಮುಖ್ಯಸ್ಥ ಅರ್ಣಬ್ ಗೋಸ್ವಾಮಿಗೆ ನೀಡಲಾಗಿರುವ ರಕ್ಷಣೆಯನ್ನು ಸುಪ್ರೀಂಕೋರ್ಟ್‌ ಮುಂದುವರಿಸಿದೆ. ಆದರೆ ಪ್ರಕರಣ ಸಂಬಂಧ ಅರ್ಣಬ್‌ ಸಲ್ಲಿಸಿರುವ ಅರ್ಜಿಯ ತೀರ್ಪನ್ನು ಕಾಯ್ದಿರಿಸಿದೆ.

ಅರ್ಣಬ್‌ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಹಾಗೂ ಎಂ.ಆರ್.‌ ಶಾ ಅವರ ಪೀಠ, ಈ ವಾರಾಂತ್ಯದಲ್ಲಿ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.

ಮುಂಬೈಯಲ್ಲಿ ಈ ಹಿಂದೆ ಹಾಗೂ ಹೊಸದಾಗಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಪಡಿಸಬೇಕು ಎಂದು ಅರ್ಣಬ್‌ ಬಯಸುವುದಾದರೆ ಅವರು ಬಾಂಬೆ ಹೈಕೋರ್ಟ್‌ ಮೊರೆ ಹೋಗಬಹುದು. ಮಧ್ಯಂತರ ರಕ್ಷಣೆ ಅವಧಿ ಮುಗಿದ ಬಳಿಕ, ಅವರಿಗೆ ಈ ಸ್ವಾತಂತ್ರ್ಯ ನೀಡಲಾಗುವುದು ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT